ಕೊರಗ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
Update: 2021-06-28 18:10 GMT
ಉಡುಪಿ, ಜೂ.28: ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯಲ್ಲಿ 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಆದಿವಾಸಿ ಜನಾಂಗದ ಕೊರಗ ವಿದ್ಯಾರ್ಥಿಗಳು ಏಳನೇ ತರಗತಿ ಮತ್ತು ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದವರಿಗೆ ಕ್ರಮವಾಗಿ 2,500 ರೂ. ಮತ್ತು 5,000 ರೂ. ವಿಶೇಷ ಪ್ರೋತ್ಸಾಹಧನ ಮಂಜೂರು ಮಾಡುವ ಕುರಿತು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಗಳ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾ ಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಣಿಪಾಲ ದೂರವಾಣಿ ಸಂಖ್ಯೆ: 0820-2574814ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.