ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಬ್ಲಾಕ್ ಅಧ್ಯಕ್ಷರ ನೇಮಕ

Update: 2021-06-29 12:42 GMT

ಮಂಗಳೂರು, ಜೂ.29: ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ನಿರ್ದೇಶನದಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಕ್ಷೇತ್ರದ ಪಕ್ಷದ ಶಾಸಕರು, ಮಾಜಿ ಶಾಸಕರ ಅನುಮೋದನೆಯೊಂದಿಗೆ ಮತ್ತು ಬ್ಲಾಕ್ ಅಧ್ಯಕ್ಷರ ಶಿಫಾರಸಿನೊಂದಿಗೆ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ವಿವಿಧ ಬ್ಲಾಕ್‌ಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿತು.

ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷರಾಗಿ ಹರೀಶ್ ಪೂಜಾರಿ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಅಧ್ಯಕ್ಷರಾಗಿ ವ್ಯಾಸ ರಾವ್, ಮೂಡುಬಿದಿರೆ ಬ್ಲಾಕ್ ಅಧ್ಯಕ್ಷರಾಗಿ ಜಯರಾಮ ಬಂಗೇರ, ಮುಲ್ಕಿ ಬ್ಲಾಕ್ ಅಧ್ಯಕ್ಷರಾಗಿ ಮಹೇಶ್ ಯಾನೆ ಮುನ್ನ, ಸುರತ್ಕಲ್ ಬ್ಲಾಕ್ ಅಧ್ಯಕ್ಷರಾಗಿ ಆನಂದ ಸುರತ್ಕಲ್, ಗುರುಪುರ ಬ್ಲಾಕ್ ಅಧ್ಯಕ್ಷರಾಗಿ ಫಹದ್ ಇಬ್ನು ಮುಫೀದ್, ಮಂಗಳೂರು ನಗರ ಬ್ಲಾಕ್ ಅಧ್ಯಕ್ಷರಾಗಿ ಪ್ರಶಾಂತ್ ಅಮೀನ್, ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ ಅವರನ್ನು ನೇಮಕ ಮಾಡಲಾಯಿತು.

ಉಳ್ಳಾಲ ಬ್ಲಾಕ್ ಅಧ್ಯಕ್ಷರಾಗಿ ಬಶೀರ್ ಮುಂಡೋಡಿ, ಮುಡಿಪು ಬ್ಲಾಕ್ ಅಧ್ಯಕ್ಷರಾಗಿ ಮುರಳೀಧರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾಗಿ ರಾಮಚಂದ್ರ ಸುವರ್ಣ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾಗಿ ರೋಶನ್ ರೈ, ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಮೆಲ್ವೀನ್ ಮೊಂತೆರೊ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಶೇಷಪ್ಪ ನಿಕ್ಕಿಲು, ಸುಳ್ಯ ಬ್ಲಾಕ್ ಅಧ್ಯಕ್ಷರಾಗಿ ವಸಂತ ಕುಡಪಾಜೆ, ಕಡಬ ಬ್ಲಾಕ್ ಅಧ್ಯಕ್ಷರಾಗಿ ರಾಜಕೃಷ್ಣ ಬಿಳಿನೆಲೆ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಪ್ರಟಕನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News