ಪಿಕ್‌ಅಪ್ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2021-06-29 17:03 GMT

ಶಂಕರನಾರಾಯಣ: ಪಿಕ್‌ಅಪ್ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಬೆಳ್ವೆ ಗ್ರಾಮದ ತಾರೀಕಟ್ಟೆ ಕ್ರಾಸ್ ಬಳಿಯ ಪೆಟ್ರೋಲ್ ಬಂಕ್ ಎದುರುಗಡೆ ಜೂ.29ರಂದು ಬೆಳಗಿನ ಜಾವ ನಡೆದಿದೆ.

ಮೃತರನ್ನು ಲಕ್ಷಣ ನಾಯ್ಕ ಎಂದು ಗುರುತಿಸಲಾಗಿದೆ. ಅಲ್ಬಾಡಿ ಕಡೆಯಿಂದ ಗೋಳಿಯಂಗಡಿ ಕಡೆಗೆ ಹೋಗುತ್ತಿದ್ದ ಕೋಳಿ ತುಂಬಿದ ಪಿಕ್‌ಅಪ್ ವಾಹನವು ಗೋಳಿಯಂಗಡಿ ಕಡೆಯಿಂದ ಬೆಳ್ವೆ ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಲಕ್ಷಣ ನಾಯ್ಕ ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News