ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಲಮಂಡಳಿಯಿಂದ 2 ಕೋಟಿ ರೂ. ದೇಣಿಗೆ

Update: 2021-06-29 17:15 GMT

ಬೆಂಗಳೂರು: ಜಲಮಂಡಳಿಯು ಕೋವಿಡ್ ನಿಯಂತ್ರಣ ಹಾಗೂ ಪರಿಹಾರಕ್ಕಾಗಿ ರಾಜ್ಯ ಸರಕಾರದೊಂದಿಗೆ ಕೈಜೋಡಿಸುವ ಸಲುವಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 2 ಕೋಟಿ ರೂ. ಮೌಲ್ಯದ ಡಿಡಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಹಸ್ತಾಂತರಿಸಲಾಯಿತು.

ಈ ವೇಳೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‍ಸಿಂಗ್, ಬೆಂಗಳೂರು ಜಲ ಮಂಡಳಿಯ ಅಧ್ಯಕ್ಷ ಜಯರಾಂ, ಮುಖ್ಯ ಆಡಳಿತಾಧಿಕಾರಿ ಡಾ.ಎಂ.ಮಹೇಶ್, ಆರ್ಥಿಕ ಸಲಹೆಗಾರ ಪ್ರಶಾಂತ್‍ಕುಮಾರ್, ಮುಖ್ಯ ಅಭಿಯಂತರ ಸೋಮಶೇಖರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News