ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯ ಅಂಗಾಂಗ ದಾನ

Update: 2021-06-30 13:21 GMT
ರಾಮಕೃಷ್ಣ

ಮಂಡ್ಯ, ಜೂ.30: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ಅಂಗಾಂಗವನ್ನು ದಾನ ಮಾಡುವ ಮೂಲಕ ಆತನ ಕುಟುಂಬದವರು ಇನ್ನೊಬ್ಬರ ಬಾಳಿಗೆ ನೆರವಾಗಿದ್ದಾರೆ.

ಶ್ರೀರಂಗಪಟ್ಟಣದ ಬಳಿ ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದ ರಾಮಕೃಷ್ಣ(50) ಅವರ ಅಂಗಾಂಗಗಳನ್ನು ಕುಟುಂಬದವರು ದಾನ ಮಾಡಿದ್ದಾರೆ.

ಮೈಸೂರಿನ ಆಸ್ಪತ್ರೆಯಿಂದ ರಾಮಕೃಷ್ಣ ಅವರ ಅಂಗಾಂಗಗಳನ್ನು ವಿಶೇಷ ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಯಿತು.

ಅಂಗಾಂಗ ಸಾಗಿಸಲು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಈ ಹಿಂದೆ ಇಂತಹದ್ದೇ ಪ್ರಕರಣದಲ್ಲಿ ಆ್ಯಂಬುಲೆನ್ಸ್ ಚಾಲನೆ ಮಾಡಿದ್ದ ದರ್ಶನ್ ಅವರು ರಾಮಕೃಷ್ಣ ಅವರ ಅಂಗಾಂಗಗಳಿದ್ದ ಆ್ಯಂಬುಲೆನ್ಸ್ ಚಾಲನೆ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News