ಪಂಜಾಬ್ ಕಾಂಗ್ರೆಸ್ ಒಳ ಜಗಳದ ಮಧ್ಯೆ ರಾಹುಲ್ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಧು

Update: 2021-06-30 15:01 GMT

ಹೊಸದಿಲ್ಲಿ: ಪಂಜಾಬ್ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು  ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ವಿರುದ್ಧದ ದೂರುಗಳು ಪಕ್ಷದ ರಾಜ್ಯ ಘಟಕದಲ್ಲಿನ ಬಿಕ್ಕಟ್ಟಿಗೆ ಕಾರಣವಾಗಿವೆ. ದಿಲ್ಲಿ ಭೇಟಿಯಲ್ಲಿರುವ ಸಿಧು ಇಂದು  ರಾಹುಲ್ ಗಾಂಧಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು.

ರಾಜಕಾರಣಿ ಹಾಗೂ ಮಾಜಿ ಕ್ರಿಕೆಟಿಗ ಸಿಧು ಅವರೊಂದಿಗೆ ಯಾವುದೇ ಸಭೆಯನ್ನು ನಿಗದಿಪಡಿಸಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಘೋಷಿಸಿದ ಒಂದು ದಿನದ ನಂತರ ಈ ಭೇಟಿ ನಡೆದಿದೆ.

ಸಭೆಯ ವಿವರಗಳು ತಿಳಿದಿಲ್ಲವಾದರೂ ಸಿಧು ತಮ್ಮ  ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

"ಪ್ರಿಯಾಂಕಾ ಗಾಂಧಿಜಿ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ್ದೇನೆ" ಎಂದು ಸಿಧು ಪೋಸ್ಟ್ ಮಾಡಿದ್ದಾರೆ.

ಇದಕ್ಕೂ ಮೊದಲು ಸಿಧು ಅವರು ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿ ಸುಮಾರು 4 ಗಂಟೆ ಚರ್ಚಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News