ಮುಲ್ಕಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಮುಹಮ್ಮದ್ ಬಾವಾ ನಿಧನ
ಮುಲ್ಕಿ: ಕಾರ್ನಾಡು ನಿವಾಸಿ ಬಿ. ಮುಹಮ್ಮದ್ ಬಾವಾ (71) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು.
ಅವರು ಮುಲ್ಕಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ, ಮಾಜಿ ಲೆಫ್ಟಿನೆಂಟ್ ಗವರ್ನರ್, ಮುಲ್ಕಿ ಶಾಫಿ ಜುಮಾ ಮಸೀದಿಯ ಮಾಜಿ ಕಾರ್ಯದರ್ಶಿ ಮತ್ತು ಎಮ್.ಸಿ.ಟಿ ಶಾಲೆಯ ಟ್ರಸ್ಟಿಯಾಗಿದ್ದರು.
ಮೃತರು ಐದು ಮಂದಿ ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞರು, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ, ಮಾಜಿ ಸಚಿವ ಅಭಯ ಚಂದ್ರ ಜೈನ್, ಉದ್ಯಮಿಗಳಾದ ಅರವಿಂದ ಪೂಂಜಾ ಕಾರ್ನಾಡು, ಇನಾಯತ್ ಅಲಿ ಕೊಳಚಿಕಂಬಳ, ಮುಲ್ಕಿ ನ.ಪಂ. ಅಧ್ಯಕ್ಷ ಸುಭಾಶ್ ಶೆಟ್ಟಿ, ಸದಸ್ಯ ಪುತ್ತು ಬಾವ, ಬಾಲಚಂದ್ರ ಕಾಮತ್, ಮಾಜಿ ಅಧ್ಯಕ್ಷ ಬಿ.ಎಂ. ಆಸಿಫ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಕೆಪಿಸಿಸಿ ವಕ್ತಾರ ವಸಂತ ಬೆರ್ನಾಡ್, ಮುಲ್ಕಿ ರೋಟರಿ ಕ್ಲಬ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪದಾಧಿಕಾರಿ ವೈ.ಎನ್. ಸಾಲ್ಯಾನ್, ಉದಯ ಕುಮಾರ್ ಶೆಟ್ಟಿ, ಹೋಟೆಲ್ ಅಧಿಧನ್ ಮುಲ್ಕಿ, ಮುಲ್ಕಿ ಜಮಾಅತ್ ಅಧ್ಯಕ್ಷ ಲಿಯಾಕತ್ ಅಲಿ, ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.