ರಮೇಶ್ ಜಾರಕಿಹೊಳಿ ವಿರುದ್ಧದ ಆರೋಪಗಳು ಕಟ್ಟು ಕಥೆ ಎಂದ ಸಚಿವ ನಾರಾಯಣಗೌಡ

Update: 2021-07-01 14:59 GMT

ಚಾಮರಾಜನಗರ, ಜು.1: ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ರಮೇಶ್ ಜಾರಕಿಹೊಳಿ, ಮುನಿರತ್ನ ಮಂತ್ರಿಯಾಗುತ್ತಾರೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಖಂಡಿತ ಮಂತ್ರಿಯಾಗುತ್ತಾರೆ. ಅವರ ಬಗ್ಗೆ ನಮಗೆ ಗೌರವವಿದೆ. ಅವರ ಬಗೆಗಿನ ಆರೋಪಗಳು ಕಟ್ಟು ಕಥೆಯಾಗಿವೆ. ಅವರು ಆರೋಪದಿಂದ ಮುಕ್ತರಾಗುತ್ತಾರೆ. ನಾವು ಅವರ ಜೊತೆ ಇರುತ್ತೇವೆ ಎಂದರು.

ಬಾಂಬೆ ಟೀಂನಲ್ಲಿದ್ದ ನಾವೆಲ್ಲಾ ಒಟ್ಟಿಗೆ ಇದ್ದೋರು ಈಗಲೂ ಒಟ್ಟಿಗೆ ಇದ್ದೇವೆ. ಕೆಲವರಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು ಎಂದ ಅವರು,
ಮುಂದಿನ ಚುನಾವಣೆ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತೆ. ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News