×
Ad

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪ : ನಾಲ್ವರ ವಿರುದ್ಧ ದೂರು

Update: 2021-07-02 17:33 IST

ಪುತ್ತೂರು : ಪಂಚಾಯತ್ ನೀಡಿರುವ ದೂರಿನಂತೆ ಕೋವಿಡ್-19 ನಿಯಮ ಉಲ್ಲಂಘನೆ ಮತ್ತು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ನಾಲ್ವರ ವಿರುದ್ಧ ದೂರು ದಾಖಲಾಗಿದೆ.

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಜಯಂತಿ, ಅವರ ಮಕ್ಕಳಾದ ಸೌಮ್ಯ, ರಮ್ಯ ಹಾಗೂ ಪ್ರಕಾಶ್ ಎಂಬವರು ಕೊರೋನ ಸೋಂಕಿತರಾದ ಜಯಂತಿ ಅವರನ್ನು ಕೋವಿಡ್ ಕೇರ್ ಸೆಂಟರ್ಗೆ  ದಾಖಲಿಸುವ ವಿಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಿ ಪಂಚಾಯತ್‍ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News