ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರವನ್ನು ಯತ್ನಾಳ್, ಯೋಗೇಶ್ವರ್ ಬಿಚ್ಚಿಡುತ್ತಿದ್ದಾರೆ: ಪ್ರಕಾಶ್ ರಾಥೋಡ್

Update: 2021-07-02 12:35 GMT

ವಿಜಯಪುರ, ಜು.2: ರಾಜ್ಯ ಬಿಜೆಪಿ ಸರಕಾರದ  ಭ್ರಷ್ಟಾಚಾರ, ಅಧಿಕಾರದ ದುರುಪಯೋಗದ ಬಗ್ಗೆ ಸಚಿವ ಯೋಗೇಶ್ವರ್, ಶಾಸಕ ಬಸನಗೌಡ ಯತ್ನಾಳ್ ಅವರೇ ಸಾರ್ವಜನಿಕವಾಗಿ ಬಹಿರಂಗ ಮಾಡಿದ್ದಾರೆ. ಹೀಗಾಗಿ, ಕಾಂಗ್ರೆಸ್ ಪಕ್ಷ ಯಡಿಯೂರಪ್ಪ ಸರಕಾರದ ದುರಾಡಳಿತದ ಕುರಿತು ಹೇಳುವ ಅಗತ್ಯವೇ ಇಲ್ಲ ಎಂದು ಕೆಪಿಸಿಸಿ ವಕ್ತಾರ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಟೀಕಿಸಿದ್ದಾರೆ. 

ಶುಕ್ರವಾರ ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ನಿರ್ವಹಣೆಯಲ್ಲಿ ಸೋಲು ಕಂಡ ಸರಕಾರ, ಔಷಧಿ, ಲಸಿಕೆ ನೀಡುವಲ್ಲಿ ಲೋಪ ಮಾಡಿದ್ದೇ ಸಾವು ಹೆಚ್ಚಲು ಕಾರಣ. ಕೋವಿಡ್ ಪರಿಹಾರದ ಕಿಟ್ ನೀಡುವಲ್ಲೂ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರ ಜನರಿಗೆ ಮೋಸ ಮಾಡಿದೆ ಎಂದು ದೂರಿದರು.

ಮೋದಿ ಅವರು ಅಧಿಕಾರಕ್ಕೆ ಬರುತ್ತಲೇ ರಫ್ತು ನೀತಿಯನ್ನು ಕೂಡ ಹದಗೆಡಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ದೇಶದ ಕಚ್ಚಾ ಹಾಗೂ ಸಿದ್ಧ ವಸ್ತುಗಳಿಗೆ ಬೇಡಿಕೆ ಇದ್ದರೂ ರಫ್ತು ಕುಸಿತ ಮಾಡಿದ್ದಾರೆ. ಪರಿಣಾಮ ದೇಶಿ ರೈತರ ರೇಷ್ಮೆ ಸೇರಿದಂತೆ ಬಹುತೇಕ ಉತ್ಪನ್ನಕ್ಕೆ ಬೇಡಿಕೆ ಕುಸಿತವಾಗಿ, ಚೀನಾ ವಸ್ತುಗಳ ಆಮದು ಹೆಚ್ಚಿದೆ ಎಂದು ಪ್ರಕಾಶ್ ರಾಥೋಡ್ ದೂರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News