ಇಬ್ಬರು ಅಧಿಕಾರಿಗಳಿಗೆ ಪ್ರಭಾರ ವಹಿಸಿ ರಾಜ್ಯ ಸರಕಾರ ಆದೇಶ
Update: 2021-07-03 13:13 GMT
ಬೆಂಗಳೂರು, ಜು. 3: ಇತ್ತಿಗಷ್ಟೇ ವರ್ಗಾವಣೆಯಾಗಿದ್ದ ವಾಣಿಜ್ಯ ತೆರಿಗೆ ಇಲಾಖೆ ನೂತನ ಆಯುಕ್ತೆ ಸಿ.ಶಿಖಾ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಪ್ರಭಾರವನ್ನು ವಹಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅದೇ ರೀತಿಯಲ್ಲಿ ಕೊಪ್ಪಳ ನೂತನ ಜಿಲ್ಲಾಧಿಕಾರಿ ವರ್ಗಾವಣೆಯಾಗಿದ್ದ ಸುರಲ್ಕರ್ ವಿಕಾಸ್ ಕಿಶೋರ್ ಅವರಿಗೆ ಕೊಪ್ಪಳ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಇಒ) ಹುದ್ದೆಯ ಪ್ರಭಾರ ವಹಿಸಿ ಶನಿವಾರ ರಾಜ್ಯ ಸರಕಾರ ಆದೇಶ ಮಾಡಿದೆ.