×
Ad

ರಾಜ್ಯ ಸರಕಾರದ ಆದೇಶ ಪಾಲನೆ: ದ.ಕ.ಜಿಲ್ಲಾಧಿಕಾರಿ ಸ್ಪಷ್ಟನೆ

Update: 2021-07-03 21:44 IST

ಮಂಗಳೂರು, ಜು.3: ಈಗಾಗಲೆ ರಾಜ್ಯ ಸರಕಾರವು ಜು.5ರಿಂದ ಅನ್ವಯಗೊಂಡಂತೆ ಲಾಕ್‌ಡೌನ್‌ನಲ್ಲಿ ಸಾಕಷ್ಟು ಸಡಿಲಿಕೆ ಮಾಡಿದೆ. ಅದನ್ನು ದ.ಕ.ಜಿಲ್ಲೆಯಲ್ಲೂ ಯಥಾವತ್ತಾಗಿ ಪಾಲಿಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.

ಜು.4ರ ರವಿವಾರ ವೀಕೆಂಡ್ ಕರ್ಫ್ಯೂ ಇದೆ. ಆದರೆ ಈಗಾಗಲೆ ತಿಳಿಸಿದಂತೆ ರವಿವಾರ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗುವುದು. ಜು.5ರ ಬೆಳಗ್ಗೆ 5ರಿಂದ ಜು.19ರ ಬೆಳಗ್ಗೆ 5ರವರೆಗೆ ರಾಜ್ಯ ಸರಕಾರ ಹೊರಡಿಸಿದ ಸಡಿಲಿಕೆ ಮತ್ತು ನಿರ್ಬಂಧಗಳು ಜಿಲ್ಲೆಯಲ್ಲಿ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News