×
Ad

ಕಿಂಡಿ ಅಣೆಕಟ್ಟು ಯೋಜನೆಗೆ 500 ಕೋಟಿ ರೂ. ನಿಗದಿ ಪಡಿಸಲಾಗಿದೆ : ಸಚಿವ ಜೆ.ಸಿ.ಮಾಧುಸ್ವಾಮಿ

Update: 2021-07-03 22:14 IST

ಮಂಗಳೂರು, ಜು.3: ರಾಜ್ಯದಲ್ಲಿ ಪಶ್ಚಿಮ ವಾಹಿನಿ ಯೋಜನೆಯ ಪ್ರಕಾರ ಹರಿಯುವ ನದಿ ಗಳಿಗೆ ಸುಮಾರು 3-4. ಕಿ.ಮೀ ಅಂತರ ದಲ್ಲಿ ಅಲ್ಲಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲು ರಾಜ್ಯ ಬಜೆಟ್ ನಲ್ಲಿ 500 ಕೋಟಿ ರೂ. ನಿಗದಿ ಪಡಿಸಲಾಗಿದೆ ಎಂದು ಸಣ್ಣ ನೀರಾವರಿ ಖಾತೆ ಯ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ  ತಿಳಿಸಿದ್ದಾರೆ.

ಅವರು ಇಂದು ದ.ಕ ಜಿಲ್ಲೆಯ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ದ.ಕ ಜಿಲ್ಲೆಯ ವಿವಿಧ ವಿಧಾನ ಸಭಾ ಕ್ಷೇತ್ರದ ಶಾಸಕರ ಜೊತೆ ಪಶ್ಚಿಮ ವಾಹಿನಿ ಯೋಜನೆಯ ಅನುಷ್ಠಾನ ದ ಬಗ್ಗೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸಮಾ ಲೋಚನಾ ಸಭೆ ನಡೆಸಿದರು.

ಈ ಯೋಜನೆಯ ಮುಖ್ಯ ಉದ್ದೇಶ ಕೃಷಿ ಜಮೀನುಗಳಿಗೆ ನೀರು ಒದಗಿಸುವುದು  ಮತ್ತು ಕುಡಿಯುವ ನೀರು ಪೂರೈಕೆ ಮಾಡುವುದಾಗಿದೆ. ಅಂತರ್ಜಲದ ಅಭಿವೃದ್ಧಿಗೂ ಇದರಿಂದ ಸಹಾಯಕವಾಗಲಿದೆ. ಪಶ್ಚಿಮಾ ಮುಖವಾಗಿ ಹರಿದು ಸಮುದ್ರ ಸೇರುವ ನದಿಗಳಿಗೆ ಕಿಂಡಿ ಅಣೆಕಟ್ಟು ನಿರ್ಮಿ ಸುವ  ಈ ಯೋಜನೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೀರಿನ ಅಭಾವದ ಸಮಸ್ಯೆ ನಿವಾರಿಸಲು  ಮತ್ತು ಅಂತರ್ಜಲ ದ ಅಭಿವೃದ್ಧಿ ಗೆ ಸಹಕಾರಿಯಾಗಲಿದೆ ಎಂದು ಮಾಧು ಸ್ವಾಮಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಯು.ಟಿ. ಖಾದರ್, ಸಂಜೀವ ಮಠಂದೂರು, ಭರತ್ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News