ಕಾರುಗಳ ಕಳವು ಆರೋಪ: ಓರ್ವನ ಬಂಧನ

Update: 2021-07-03 17:04 GMT

ಬೆಂಗಳೂರು, ಜು.3: ಕಾರು ಕಳವು ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಿರುವ ಬ್ಯಾಟರಾಯನಪುರ ಠಾಣಾ ಪೆÇಲೀಸರು 25 ಲಕ್ಷ ಮೌಲ್ಯದ 4 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಬ್ಯಾಟರಾಯನಪುರದ ಬಂಧಿತ ಆರೋಪಿಯಿಂದ 25 ಲಕ್ಷ ಬೆಲೆ ಬಾಳುವ 4 ಕಾರು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಡಾ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಕಾರಿನ ಮಾಲಕರೊಬ್ಬರು ಕಾರನ್ನು ಸರ್ವೀಸ್ ಮಾಡಿಸಲು ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ಬಳಿ ಇರುವ ಮಳಿಗೆ ಬಳಿ ನಿಲ್ಲಿಸಿದ್ದಾಗ ಆರೋಪಿಯು ಕಳವು ಮಾಡಿ ಪರಾರಿಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬ್ಯಾಟರಾಯನಪುರ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News