ಶಿವಮೊಗ್ಗ: ಟ್ರ್ಯಾಕ್ಟರ್ ಢಿಕ್ಕಿ; ಓರ್ವ ಸಾವು

Update: 2021-07-04 11:32 GMT

ಶಿವಮೊಗ್ಗ( ಜು.4): ತಾಲೂಕಿನ ಕುಂಸಿಯ ಮನೆಯೊಂದರ ಮುಂದೆ ಕುಳಿತಿದ್ದ ವ್ಯಕ್ತಿಗೆ ಟ್ರ್ಯಾಕ್ಟರ್ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.

ಸೂಡೂರು ಗ್ರಾಮದ ವಾಸುದೇವ್ (52) ಮೃತಪಟ್ಟವರು .ಘಟನೆಯಲ್ಲಿ ಗಂಭೀರ ಗಾಯಗೊಂಡ ವಾಸುದೇವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಟ್ರ್ಯಾಕ್ಟರ್ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಮೃತರ ಮಗ ಕಾರ್ತಿಕ್ ನೀಡಿದ ದೂರಿನ ಮೇರೆಗೆ ಕಲಂ 279, 304(ಎ) ಐಪಿಸಿ ಅನ್ವಯ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News