ಮೂವರು ಸರಗಳ್ಳರ ಬಂಧನ: 12 ಲಕ್ಷ ರೂ.ಮೌಲ್ಯದ ಚಿನ್ನಾಭರಣ ವಶ

Update: 2021-07-04 18:07 GMT

ಬೆಂಗಳೂರು, ಜು.4: ಒಂಟಿ ಮಹಿಳೆಯರ ಚಿನ್ನದ ಸರಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದ ಮೂವರು ಕುಖ್ಯಾತ ಸರಗಳ್ಳರನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಬಂಧಿತರನ್ನು ಹೊಸಕೋಟೆಯ ಮುನಿಯಪ್ಪ(27), ಚಂದು(21), ಜಯಕುಮಾರ್(28) ಎಂದು ಗುರುತಿಸಲಾಗಿದೆ. ಬಂಧಿತರಿಂದ 12 ಲಕ್ಷ ರೂ.ಮೌಲ್ಯದ ಚಿನ್ನ, 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಮುನಿಯಪ್ಪ ಸಹಚರರಾದ ರಾಜು, ಸತೀಶ, ಶಿವಶಂಕರ್, ಗೋಪಿ, ರವಿ ಇನ್ನಿತರರ ಜತೆ ಸೇರಿ 12ಕ್ಕೂ ಹೆಚ್ಚು ಸರ ಅಪಹರಣ ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದು ಬಂದಿದೆ.  ಕಳವು ಮಾಡಿದ ಬೈಕ್‍ನಲ್ಲಿ ನಿರ್ಜನ ಪ್ರದೇಶಗಳಲ್ಲಿ ಸಂಚರಿಸುತ್ತ ಒಂಟಿ ಮಹಿಳೆಯರನ್ನು ಹಿಂಬಾಲಿಸಿ ಸರಗಳವು ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರ ಅಪಹರಣ ಪ್ರಕರಣಗಳು ದಾಖಲಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News