ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ :ಯತ್ನಾಳ್ ಗೆ ಬಿಎಸ್ ವೈ ಅಭಿಮಾನಿಗಳಿಂದ ಘೇರಾವ್

Update: 2021-07-06 18:26 GMT

ಚಾಮರಾಜನಗರ:  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವೀರಶೈವ ಸಮಾಜದ ಮುಖಂಡರು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಭಿಮಾನಿಗಳು ಘೇರಾವ್ ಹಾಕಿ ಪ್ರತಿಭಟಿಸಿದ್ದಾರೆ. ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಚಾಮರಾಜನಗರ ಜಿಲ್ಲಾ ಪ್ರವಾಸದಲ್ಲಿರುವ ಶಾಸಕರಿಗೆ ನಗರದ ಹರಳುಕೋಟೆ ಆಂಜನೇಯ ದೇವಾಲಯ ಸಮೀಪ ಯಡಿಯೂರಪ್ಪ ಅಭಿಮಾನಿಗಳು ಘೇರಾವ್ ಹಾಕಿದ್ದಾರೆ.

ವೀರಶೈವ ಲಿಂಗಾಯತ ಸಮಾಜವನ್ನು 2 ಎ  ಸೇರಿಸಬೇಕೆಂದು ಒತ್ತಾಯಿಸಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲು ಬಂದಿರುವ ಯತ್ನಾಳ್ ಅವರ ಕಾರಿಗೆ ಮುತ್ತಿಗೆ ಹಾಕಿದ ಲಿಂಗಾಯತ ಸಮಾಜದ ಯುವಕರು, ಮುಖಂಡರುಗಳು ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ವಿರುದ್ಧ ಯಾವುದೇ ಹೇಳಿಕೆಗಳನ್ನು ಕೊಡಬಾರದು, ಸಮಯದಾಯ ಒಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು.

ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿ ಯತ್ನಾಳ್ ಅವರಿಗೆ ಭದ್ರತೆ ಒದಗಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News