×
Ad

ತಡಂಬೈಲ್: ಸ್ಕೂಟರ್ ಸವಾರ ಮೃತ್ಯು

Update: 2021-07-06 22:51 IST

ಮಂಗಳೂರು, ಜು.6: ನಗರ ಹೊರವಲಯದ ಸುರತ್ಕಲ್ ಸಮೀಪದ ತಡಂಬೈಲ್ ಬಳಿ ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.

ಸುರತ್ಕಲ್‌ನ ರಚನಾ ಪ್ಯಾಲೇಸ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಪ್ರೇಮಶರ್ಮ ಮತ್ತು ಮ್ಯಾನೇಜರ್ ಪ್ರಜ್ವಲ್ ಕುಮಾರ್ ಎಂ. ಜು.5ರ ರಾತ್ರಿ 10:40ಕ್ಕೆ ಸುರತ್ಕಲ್‌ನಿಂದ ತಡಂಬೈಲ್‌ಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಸವಾರ ಪ್ರೇಮಶರ್ಮರ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆಯಿತು. ಇದರಿಂದ ಸವಾರ ಪ್ರೇಮಶರ್ಮ ಗಂಭೀರ ಗಾಯಗೊಂಡಿದ್ದು, ತಕ್ಷಣ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಮಂಗಳೂರು ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News