ಅಚ್ಚೇದಿನ್ ಹೆಸರಿನಲ್ಲಿ ದೇಶವನ್ನೇ ಸರ್ವನಾಶಗೊಳಿಸಿದ ಮೋದಿ ಸರಕಾರ: ಸುನೀಲ್ ಕುಮಾರ್ ಬಜಾಲ್
ಮಂಗಳೂರು, ಜು.6: ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಹೇಳಿಕೊಂಡು ದೇಶದ ಜನತೆಗೆ ಮಂಕುಬೂದಿ ಎರಚಿ ಕಳೆದ 7 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದಿವಾಳಿನಂಚಿಗೆ ತಳ್ಳಿ ಜನರ ಬದುಕನ್ನೇ ಸರ್ವನಾಶ ಮಾಡಿದೆ ಎಂದು ಸಿಪಿಎಂ ನಗರ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಟೀಕಿಸಿದರು.
ಬೆಲೆಯೇರಿಕೆಯ ವಿರುದ್ಧ ಸಿಪಿಎಂ ನೇತೃತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಮಂಗಳವಾರ ಉರ್ವಸ್ಟೋರ್ನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಕೇಂದ್ರ ಸರಕಾರದ ವಿರುದ್ಧ ಪ್ರಬಲ ಜನಚಳುವಳಿ ಬೆಳೆದು ಬರುವ ಮೂಲಕ ದೇಶವನ್ನು ರಕ್ಷಿಸಲು ಜನತೆ ಒಂದಾಗಿ ನಿಲ್ಲಬೇಕಾಗಿದೆ ಎಂದು ಸುನಿಲ್ ಕುಮಾರ್ ಬಜಾಲ್ ಹೇಳಿದರು.
ಪ್ರತಿಭಟನಾ ಸಭೆಯಲ್ಲಿ ಪಕ್ಷದ ಮುಖಂಡರಾದ ಅಶೋಕ್ ಶ್ರೀಯಾನ್, ಶ್ಯಾಮುವೆಲ್ ಟೈಟಸ್,ದಿನೇಶ್ ಶ್ರೀಯಾನ್, ಸರೋಜಿನಿ, ಮನೋಜ್, ಪ್ರಶಾಂತ್ ಎಂ.ಬಿ, ನಾಗೇಂದ್ರ, ರಘುವೀರ್, ರಾಜೇಶ್, ಇಕ್ಬಾಲ್, ಸುಖೇಶ್, ಸನತ್ ಉಪಸ್ಥಿತರಿದ್ದರು.