ಸುಲಿಗೆ ಆರೋಪ: ಇಬ್ಬರು ಬಂಧನ

Update: 2021-07-07 14:01 GMT

ಬೆಂಗಳೂರು, ಜು.7: ಮಹಿಳೆಯರನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ ಆರೋಪ ಪ್ರಕರಣ ಸಂಬಂಧ ಇಬ್ಬರನ್ನು ಜೀವನ್‍ಭಿಮಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಮೊಬೈಲ್, ಕೃತ್ಯಕ್ಕೆ ಬಳಸುತ್ತಿದ್ದ ಸ್ಕೂಟರನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ ತಿಳಿಸಿದ್ದಾರೆ.

ಜೀವನ್‍ಭಿಮಾ ನಗರದ ವಿಶ್ವೇಶ್ವರಯ್ಯ ಪಾರ್ಕಿನ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಮೊಬೈಲ್, ಚೀಲವನ್ನು ಬಂಧಿತ ಆರೋಪಿಗಳು ಸ್ಕೂಟರ್‍ನಲ್ಲಿ ಹಿಂಬಾಲಿಸಿ ಕಸಿದು ಪರಾರಿಯಾಗಿದ್ದರು.ಈ ಸಂಬಂಧ ಪ್ರಕರಣ ದಾಖಲಿಸಿದ ಪೊಲೀಸರು, ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News