ಕಲ್ಲಿನ ಕ್ರಷರ್ ಘಟಕದಲ್ಲಿ ಸ್ಫೋಟ: ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Update: 2021-07-08 15:00 GMT

ವಿಜಯಪುರ, ಜು.8: ಕಲ್ಲಿನ ಕ್ರಷರ್ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ಅಲಿಯಾಬಾದ್ ಬಳಿ ಗುರುವಾರ ನಡೆದಿದೆ.

ಅಲಿಯಾಬಾದ್ ನಿವಾಸಿ ಮೋಹನ್ ನಾಯ್ಕ್ (45) ಮೃತ ವ್ಯಕ್ತಿ. ಸಾವಳಗಿ ಕಲ್ಲು ಕ್ರಷರ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಈ ಸಂದರ್ಭ ಅದರ ಸಮೀಪದಲ್ಲೇ ಬೈಕ್ ನಲ್ಲಿ ಹೋಗುತ್ತಿದ್ದ ಇವರಿಗೆ ಕಲ್ಲು ಬಡಿದಿದೆ ಎನ್ನಲಾಗಿದೆ. ಪರಿಣಾಮ ಮೋಹನ್ ನಾಯ್ಕ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಿರೀಶ್ ಹಳ್ಳಿ ಹಾಗೂ ಸಚಿನ್ ಹಳ್ಳಿ ಎಂಬವರು ಗಾಯಗೊಂಡಿದ್ದಾರೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಅನುಪಮ್ ಅಗರವಾಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಲ್ಲು ಕ್ವಾರಿ ಮಾಲಕ ಹಾಗೂ ಸ್ಫೋಟ ಮಾಡಿದವರ ಹುಡುಕಾಟಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಎಸ್ಪಿ ಅನುಪಮ್ ಅವರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News