ಲಾರಿಗೆ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2021-07-09 16:59 GMT

ಬ್ರಹ್ಮಾವರ, ಜು.9: ಯಾವುದೇ ಸೂಚನೆ ನೀಡದೇ ರಸ್ತೆ ಮಧ್ಯೆ ನಿಲ್ಲಿಸಿದ್ದ ಲಾರಿಗೆ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದು, ಅದರಲ್ಲಿದ್ದ ಸಹ ಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾನಸ ಬಾರ್ ಎಂಡ್ ರೆಸ್ಟೋರೆಂಟ್ ಎದುರು ಗುರುವಾರ ರಾತ್ರಿ 11ಗಂಟೆ ಸುಮಾರಿಗೆ ನಡೆದಿದೆ.

ಮೃತ ಸಹಸಾವರನ್ನು ಸಂದೇಶ ನಾಯ್ಕ ಎಂದು ಗುರುತಿಸಲಾಗಿದ್ದು, ಬೈಕ್ ಚಲಾಯಿಸುತಿದ್ದ ಪವನ್ ನಾಯ್ಕ ಗಂಭೀರ ಗಾಯಗೊಂಡು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಕಮುಖ ಸಂಚಾರದ ಈ ರಸ್ತೆಯಲ್ಲಿ ಆರೋಪಿ ತನ್ನ ಲಾರಿಯನ್ನು ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೇ ನಿಲ್ಲಿಸಿದ್ದು, ಕತ್ತಲಲ್ಲಿ ಗಮನಿಸದೇ ಬ್ರಹ್ಮಾವರದಿಂದ ಉಡುಪಿಯತ್ತ ಸಾಗುತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News