ಬೆಳ್ತಂಗಡಿ; ಅಕ್ರಮ ಜಾನುವಾರು ಸಾಗಾಟ : ಇಬ್ಬರು ಆರೋಪಿಗಳ ಬಂಧನ
Update: 2021-07-09 17:06 GMT
ಬೆಳ್ತಂಗಡಿ: ಚಾರ್ಮಾಡಿ ಚೆಕ್ ಪೋಸ್ಟಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವಾಹನ ಚಾಲಕ ಹಾಗೂ ಇನ್ನೋರ್ವ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ವಾಹನ ಚಾಲಕ ಸುರೇಶ್ ಹಾಗು ಇನ್ನೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾರ್ಮಾಡಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಚಿಕ್ಕಮಗಳೂರು ಕಡೆಯಿಂದ ಬಂದ ವಾಹನವನ್ನು ನಿಲ್ಲಿಸಿದಾಗ ಅದರಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.