ಮನೋಹರ ಪಾರ್ಥಸಾರಥಿ ಮನುಶ್ರೀಗೆ ಜಯಂತ ಕಾಯ್ಕಿಣಿ, ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿಗೆ ಎಚ್.ಎನ್.ಆರತಿ ಆಯ್ಕೆ
Update: 2021-07-09 17:31 GMT
ಬೆಂಗಳೂರು, ಜು.9: 2021ನೆ ಸಾಲಿನ ಮನೋಹರ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಜಯಂತ ಕಾಯ್ಕಿಣಿ ಹಾಗೂ ಪಂಕಜ ಸಾಹಿತ್ಯ ದತ್ತಿ ಪ್ರಶಸಿಗೆ ಲೇಖಕಿ ಎಚ್.ಎನ್. ಆರತಿ ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಜಯಂತ ಕಾಯ್ಕಿಣಿ, ಎಚ್.ಎನ್.ಆರತಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮನೋಹರ ಪಾರ್ಥಸಾರಥಿ ಮನುಶ್ರೀ ದತ್ತಿ ಹಾಗೂ ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿಯು ತಲಾ 10 ಸಾವಿರ ರೂ.ನಗದು ಪುರಸ್ಕಾರವನ್ನೊಳಗೊಂಡಿದೆ.
ಈ ಆಯ್ಕೆ ಸಮಿತಿಯಲ್ಲಿ ಸಾಹಿತಿ ವರದಾ ಶ್ರೀನಿವಾಸ, ಪರಿಷತ್ನ ಗೌರವ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್ ಹಾಗೂ ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.