ಪೊಲೀಸ್ ಸಿಬ್ಬಂದಿಗೆ ವಿವಿಧ ಸೌಲಭ್ಯಕ್ಕೆ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ

Update: 2021-07-09 18:08 GMT

ಶಿವಮೊಗ್ಗ, ಜು.9: ಪೊಲೀಸ್ ಸಿಬ್ಬಂದಿಗೆ ವಿವಿಧ ಸೌಲಭ್ಯ ನೀಡಬೇಕೆಂದು ರಾಜ್ಯ ನಾಗರಿಕರ ರಕ್ಷಣಾ ಸಮಿತಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಅವರಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಮನವಿ ಸಲ್ಲಿಸಿತು.

ಪೊಲೀಸರು ಕಾನೂನು ವ್ಯವಸ್ಥೆಯನ್ನು ಕಾಪಾಡುವಲ್ಲಿ ತಮ್ಮದೇ ಪಾತ್ರ ವಹಿಸಿರುತ್ತಾರೆ. ಅವರಿಗೆ ಸೌಲಭ್ಯಗಳು ನೀಡಬೇಕು. ಮುಖ್ಯವಾಗಿ ಪೊಲೀಸ್ ಸಿಬ್ಬಂದಿಗಳ ಮಕ್ಕಳ ವಿವಾಹ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಪೊಲೀಸ್ ಕಲ್ಯಾಣ ಮಂಟಪಗಳನ್ನು ಸ್ಥಾಪಿಸಬೇಕು. ಬಂದೋಬಸ್ತ್ ನಲ್ಲಿ ಇರುವ ಪೊಲೀಸ್ ಸಿಬ್ಬಂದಿಗೆ ಶೌಚಾಲಯ ವ್ಯವಸ್ಥೆ ಇರುವುದಿಲ್ಲ. ಕೂರಲು ಆಸನಗಳು ಇರುವುದಿಲ್ಲ. ಬಂದೋಬಸ್ತ್ ಸಮಯದಲ್ಲಿ ಸಂಚಾರಿ ಟಾಯ್ಲೆಟ್ ನಿರ್ಮಿಸಿಕೊಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ನಾಗರಿಕ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಕೆ. ಶೇಖರ್, ಮಹಿಳಾ ಅಧ್ಯಕ್ಷೆ ಉಷಾ ಉತ್ತಪ್ಪ, ಪದಾಧಿಕಾರಿಗಳಾದ ಆರ್. ರಾಘವೇಂದ್ರ, ವಿನೋದ್ ಸೇರಿದಂತೆ ಹಲವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News