ಮೇಕೆದಾಟು ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿಯ ನಂಬಿಕೆ ಇದೆ: ಡಿ.ಕೆ.ಶಿವಕುಮಾರ್ ಟ್ವೀಟ್

Update: 2021-07-13 12:39 GMT

ಬೆಂಗಳೂರು, ಜು.13: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಇಂದು ನಡೆಸಲಿರುವ ಸಭೆಯಲ್ಲಿ ಮೇಕೆದಾಟು ಅಣೆಕಟ್ಟೆ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುವರೆಂದು ನಂಬಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ' ಇದು ಇಡೀ ರಾಜ್ಯದ ಜನರ ನಂಬಿಕೆಯೂ ಹೌದು. ಯಡಿಯೂರಪ್ಪನವರೂ ಈ ನಿಟ್ಟಿನಲ್ಲಿ ಕೈ ಜೋಡಿಸುವರೆಂಬ ವಿಶ್ವಾಸವಿದೆ' ಎಂದುಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News