×
Ad

​ಉಡುಪಿ: ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ

Update: 2021-07-13 18:34 IST

ಉಡುಪಿ, ಜು.13: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನವು, ಉಡುಪಿಯಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ತರಬೇತಿ ಕಾರ್ಯಕ್ರಮವನ್ನು ಹೊಸ ತರಗತಿಯೊಂದಿಗೆ ಆರಂಭಿಸುತ್ತಿದೆ.

ಇದೇ ಜು.20ರ ಮಂಗಳವಾರಹದಿಂದ ಹೊಸ ತರಗತಿಗಳು ಪ್ರಾರಂಭಗೊಳ್ಳಲಿವೆ. ಕಳೆದ 4 ವರ್ಷಗಳಿಂದ ಉಡುಪಿಯ ಸೋದೆ ಮಠದಲ್ಲಿ ಯಕ್ಷಗುರು ರಾಕೇಶ್ ರೈ ಅಡ್ಕ ಇವರ ಮೂಲಕ ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದೆ. ತರಬೇತಿ ಉಚಿತವಾಗಿದ್ದು, ಹೊಸ ತರಗತಿಗಳು ಪ್ರತೀ ಮಂಗಳವಾರ ಸಂಜೆ 5:00ರಿಂದ 6:00ಗಂಟೆಯವರೆಗೆ ನಡೆಯಲಿದೆ.

ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ಪ್ರತಿಷ್ಠಾನಕ್ಕೆ ತಮ್ಮ ಮಠದಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟಿದ್ದು, ಆಸಕ್ತರು ಇದರ ಸದುಪಯೋಗ ವನ್ನು ಪಡೆದುಕೊಳ್ಳುವಂತೆ ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.

ವಯಸ್ಸಿನ ಮಿತಿಯಿಲ್ಲದೆ ಆಸಕ್ತರು ನೇರವಾಗಿ ಮಂಗಳವಾರದಂದು ತರಗತಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ: 9844212104/ 9663424981/9845150802ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News