ಭಟ್ಕಳ: ಪತ್ರಕರ್ತರ ಸಂಘದ ಕೆ. ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿ ಘೋಷಣೆ

Update: 2021-07-14 14:11 GMT

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿ ವರ್ಷ ಕೊಡಮಾಡುವ ಕೆ. ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು ಜು.18ರಂದು ಯಲ್ಲಾಪುರದಲ್ಲಿ ನಡೆಯಲಿರುವ ಜಿಲ್ಲಾ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು 2020ನೇ ಸಾಲಿನ ಪ್ರಶಸ್ತಿಗೆ ಹಿರಿಯ ಪ್ರತ್ರಕರ್ತರು, ಜಿಲ್ಲೆಯ ಪತ್ರಿಕೋಧ್ಯಮದಲ್ಲಿ ಸಾಧನೆ ಮಾಡಿದ ಜನಮಾಧ್ಯಮ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಜಯರಾಮ ಹೆಗಡೆ ಶಿರಸಿ ಇವರಿಗೆ ಹಾಗೂ 2021ನೇ ಸಾಲಿನ ಪ್ರಶಸ್ತಿಯನ್ನು ಹಿರಯ ಪತ್ರಕರ್ತ ಹಾಗೂ ಹೊಸದಿಗಂತ ಪತ್ರಿಕೆಯ ಉ.ಕ.ಜಿಲ್ಲಾ ವರದಿಗಾರ, ಪ್ರಸ್ತುತ ಹುಬ್ಬಳ್ಳಿಯ ಸ್ಥಾನಿಕ ಸಂಪಾದಕ ವಿಠಲದಾಸ ಕಾಮತ್ ಅವರಿಗೆ ಪ್ರದಾನ ಮಾಡಲಾಗುವುದು ಎಂದೂ ತಿಳಿಸಲಾಗಿದೆ. 

ಕೋವಿಡ್-19 ಕಾರಣಕ್ಕಾಗಿ 2020ನೇ ಸಾಲಿನಲ್ಲಿ ಪ್ರಶಸ್ತಿಯನ್ನು ನೀಡದೇ ಇರುವುದರಿಂದ ಈ ಬಾರಿ ಪ್ರಶಸ್ತಿಗೆ ಜಿಲ್ಲೆಯ ಪತ್ರಕರ್ತರನ್ನು ಆಯ್ಕೆ ಮಾಡಲು ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ಅಡಿ, ರಾಜ್ಯ ಸಮಿತಿ ಸದಸ್ಯ ಜಿ. ಸುಬ್ರಾಯ ಭಟ್ಟ ಬಕ್ಕಳ ಹಾಗೂ ಸಂಘದ ಉಪಾಧ್ಯಕ್ಷ ಬಸವರಾಜ ವಿ. ಪಾಟೀಲ ಇವರನ್ನೊಳಗೊಂಡ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು ಆಯ್ಕೆ ಸಮಿತಿಗೆ ಬಂದ ಹೆಸರುಗಳಲ್ಲಿ ಹಿರಿತನವನ್ನು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರ ಒಟ್ಟಾಭಿಪ್ರಾಯವನ್ನು ಪರಿಗಣಿಸಿ ಜಯರಾಮ ಹೆಗಡೆ ಹಾಗೂ ವಿಠಲದಾಸ ಕಾಮತ್ ಅವರ ಹೆಸರುಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಪ್ರಶಸ್ತಿಗೆ ಆಯ್ಕೆಯಾದವರನ್ನು ಜಿಲ್ಲಾಧ್ಯಕ್ಷ ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News