ಬೆಂಗಳೂರು: ಮರಕ್ಕೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು

Update: 2021-07-18 11:31 GMT

ಬೆಂಗಳೂರು, ಜು. 18: ವೇಗವಾಗಿ ಹೋಗುತ್ತಿದ್ದ ಬೈಕ್ ಮರಕ್ಕೆ ಢಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಹೊರವಲಯದ ಕಳಲುಘಟ್ಟದ 25 ವರ್ಷದ ನವೀನ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಡರಾತ್ರಿ ಮೃತ ನವೀನ್ ಸ್ನೇಹಿತನನ್ನು ಬೈಕ್‍ನಲ್ಲಿ ಕೂರಿಸಿಕೊಂಡು ವೇಗವಾಗಿ ಮನೆಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ನಿಯಂತ್ರಣ ತಪ್ಪಿ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸಮೀಪ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದ್ದಾರೆ. ಇದರ ರಭಸಕ್ಕೆ ಕೆಳಗೆ ಬಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ತ್ಯಾಮಗೊಂಡ್ಲು ಠಾಣೆಯ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿ ಮೃತದೇಹಗಳಲ್ಲಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News