ಸಿಎಂ ಯಡಿಯೂರಪ್ಪ ರಾಜೀನಾಮೆ ವದಂತಿ: ಬಿಜೆಪಿ ಹೈಕಮಾಂಡ್ ಗೆ ಪಾಠ ಹೇಳಿದ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್

Update: 2021-07-19 12:32 GMT

ಬೆಂಗಳೂರು, ಜು.19: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿರುವ ಬೆನ್ನಲ್ಲೇ  ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. 

ಇದೀಗ ಈ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಬಿ ಪಾಟೀಲ್ , ಬಿ.ಎಸ್ ಯಡಿಯೂರಪ್ಪ ಅವರ ಪರವಾಗಿ ಟ್ವೀಟ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. 

"ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ" ಎಂದು ಟ್ವೀಟ್ ಮಾಡಿದ್ದಾರೆ. 


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News