ತನ್ನ ಪರವಾಗಿ ಪ್ರತಿಭಟನೆ, ಹೇಳಿಕೆಗಳು: ಮೌನ ಮುರಿದ ಸಿಎಂ ಬಿಎಸ್ ವೈ ಹೇಳಿದ್ದೇನು ?

Update: 2021-07-21 16:17 GMT

ಬೆಂಗಳೂರು,ಜು.21: ರಾಜ್ಯದಲ್ಲಿ 'ಮುಖ್ಯಮಂತ್ರಿ ಬದಲಾವಣೆ' ವಿಚಾರದ ಬೆನ್ನಲ್ಲೇ ಹಲವು ಮಠಾಧೀಶರು ಸೇರಿದಂತೆ ವಿವಿಧ ಸಂಘಟನೆಗಳು ಯಡಿಯೂರಪ್ಪ ಅವರ ಪರವಾಗಿ ಬೆಂಬಲ ವ್ಯಕ್ತಪಡಿಸಿ ಹೇಳಿಕೆಗಳನ್ನು ನೀಡುತ್ತಿದ್ದು, ಪ್ರತಿಭಟನೆಯ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. 

ಇದೀಗ ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, 'ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ' ಎಂದು ಟ್ವೀಟ್ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News