​ಬಂಗಾಳ : ಇಬ್ಬರು ಟಿಎಂಸಿ ಕಾರ್ಯಕರ್ತರ ಹತ್ಯೆ

Update: 2021-07-22 03:55 GMT

ಬರಾಸಟ್ (ಪಶ್ಚಿಮ ಬಂಗಾಳ) : ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬುಧವಾರ ಆಂಗತುಕರು ನಡೆಸಿದ ಗುಂಡಿನ ದಾಳಿಯಲ್ಲಿ ತೃಣಮೂಲ ಕಾಂಗ್ರೆಸ್‌ನ ಇಬ್ಬರು ಕಾರ್ಯಕರ್ತರು ಮೃತಪಟ್ಟಿದ್ದು, ಇತರ ಐದು ಮಂದಿ ಗಾಯಗೊಂಡಿದ್ದಾರೆ.

ಟಿಎಂಸಿ ಈ ಘಟನೆಗೆ ವಿರೋಧ ಪಕ್ಷದ ಮೇಲೆ ಆರೋಪ ಹೊರಿಸಿದ್ದರೆ, ರಾಜ್ಯದಲ್ಲಿ ಆಡಳಿತ ಪಕ್ಷದ ಒಳಜಗಳದ ಪರಿಣಾಮ ಇದು ಎಂದು ಬಿಜೆಪಿ ತಿರುಗೇಟು ನೀಡಿದೆ. ಹರೋವಾ ಪೊಲೀಸ್ ಠಾಣೆ ವ್ಯಾಪ್ತಿಯ ತಂಗ್ರ ಮರಿ ಎಂಬಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರನ್ನು 75 ವರ್ಷ ವಯಸ್ಸಿನ ಲಕ್ಷ್ಮಿ ಬಾಲ ಮಂಡಲ ಮತ್ತು 25 ವರ್ಷ ವಯಸ್ಸಿನ ಸನ್ಯಾಶಿ ಸರ್ದಾರ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ 19 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News