ಸೋಮೇಶ್ವರ, ಉಚ್ಚಿಲದಲ್ಲಿ ಕಡಲ ಆರ್ಭಟ: 30ಕ್ಕೂ ಅಧಿಕ ಮನೆಗಳು ಅಪಾಯದಲ್ಲಿ

Update: 2021-07-22 06:42 GMT

ಉಳ್ಳಾಲ : ಉಳ್ಳಾಲ ಸಮೀಪದ ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿಯಲ್ಲಿ ಕಡಲ ಆರ್ಭಟ ಹೆಚ್ಚಾಗಿದ್ದು, ಕಡಲ್ಕೊರೆತ ಪ್ರದೇಶದಲ್ಲಿ ಸುಮಾರು 30ಕ್ಕೂ ಅಧಿಕ ಮನೆಗಳು ಅಪಾಯದಲ್ಲಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

5 ವರ್ಷಗಳ ಹಿಂದೆ ಕಡಲು ಸುಮಾರು 250 ಮೀಟರ್ ದೂರದಲ್ಲಿತ್ತು. ಇದೀಗ ಪ್ರತೀ ವರ್ಷ ಕಡಲ್ಕೊರೆತದಿಂದಾಗಿ ಮನೆ ಸಮೀಪವೇ ಕಡಲ ಅಲೆ ಅಪ್ಪಳಿಸುತ್ತಿವೆ. ರಸ್ತೆಯು ಸುಮುದ್ರ ಪಾಲಾದ ಕಾರಣ ಇಲ್ಲಿನ ನಿವಾಸಿಗಳು ಹೊರಗಿನ ಸಂಪರ್ಕವನ್ನೇ ಕಳಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇಂದು ಬೆಳಗ್ಗೆಯಿಂದ ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಅನೇಕ‌ ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಕೆಲವು ಕಟ್ಟಡಗಳು ಸಮುದ್ರ ಪಾಲಾಗುವ ಭೀತಿ ಎದುರಿಸುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News