ಚಿಕ್ಕಮಗಳೂರು : ಕಾರು ಮರಕ್ಕೆ ಢಿಕ್ಕಿ; ಇಬ್ಬರು ರೈತ ಮುಖಂಡರು ಮೃತ್ಯು

Update: 2021-07-22 07:34 GMT

ಚಿಕ್ಕಮಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ರೈತ ಮುಖಂಡರು ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ರಾಮನಹಳ್ಳಿ ಬಳಿ ನಡೆದಿದೆ.

ರೈತ ಮುಖಂಡರಾದ ರಾಮನಗರ ನಿವಾಸಿ ರಾಮಸ್ವಾಮಿ (70) ಮತ್ತು ಹಾಸನ ಜಿಲ್ಲೆಯ ಬೇಲೂರಿನ ರಾಮಪ್ಪ (55) ಮೃತರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 

ರಾಮಸ್ವಾಮಿ ಅವರು ರಾಜ್ಯ ರೈತ ಸಂಘದ ಉಪ್ಯಾಧ್ಯಕ್ಷರಾಗಿದ್ದು, ರಾಮಪ್ಪ ರಾಜ್ಯ ರೈತ ಸಂಘದ ಕಾರ್ಯದರ್ಶಿಯಾಗಿದ್ದರು ಎಂದು ತಿಳಿದು ಬಂದಿದೆ.

ನವಲಗುಂದದಿಂದ ಬೇಲೂರಿಗೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿರುವುದಾಗಿ ತಿಳಿದುಬಂದಿದೆ.

ಚಿಕ್ಕಮಗಳೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News