ಕೊರೋನ ಸಂಕಷ್ಟದ ಸಮಯದಲ್ಲಿ ಸಿಎಂ ಬಿ.ಎಸ್ ವೈ ಅವರ ಬದಲಾವಣೆ ಸರಿಯಲ್ಲ: ಶಾಸಕ ಸಾ.ರಾ.ಮಹೇಶ್

Update: 2021-07-22 14:29 GMT

ಮೈಸೂರು,ಜು.22: ಕೊರೋನ ಸಂಕಷ್ಟದ ಸಮಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಸರಿಯಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟ್ ಬೀಸಿದರು.

ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಇನ್ನೂ ಮುಗಿದಿಲ್ಲ, ಮೂರನೇ ಅಲೆ ಆರಂಭವಾಗುತ್ತಿದೆ. ಸರ್ಕಾರದ ಯೋಜನೆಗಳು ಸಾಕಷ್ಟಿವೆ. ಆದರೆ ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಬದಲಾವಣೆ ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

ನಾಯಕತ್ವ ಬದಲಾವಣೆ ಬಿಜೆಪಿ ಪಕ್ಷದವರಿಗೆ ಬಿಟ್ಟ ವಿಚಾರ. ಆದರೆ ನಾನೊಬ್ಬ ಜನಪ್ರತಿನಿಧಿಯಾಗಿ ಮಾತನಾಡುವುದಾದರೆ, ಇಂತಹ ಸಂದರ್ಭ ಸೂಕ್ತವಲ್ಲ. ಈಗಾಗಲೇ ರಾಜ್ಯದ ಜನರು ಕೊರೊನಾದಿಂದ ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.
ಯಡಿಯೂರಪ್ಪನವರಿಗೆ ಮಠಾಧೀಶರ ಬೆಂಬಲ ಬಗ್ಗೆ ಮಾತನಾಡಿದ ಅವರು, ಯಾರ ಅಧಿಕಾರಾವಧಿಯಲ್ಲಿ ಮಠ-ಮಾನ್ಯಗಳಿಗೆ ಸಹಕಾರ ನೀಡುತ್ತಾರೋ ಅವರ ಬೆಂಬಲಕ್ಕೆ ಮಠಗಳು ನಿಲ್ಲುತ್ತವೆ. ಇದು ಹೊಸದೇನಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News