ಮೂಳೂರು : ತೀವ್ರಗೊಂಡ ಕಡಲ್ಕೊರೆತ

Update: 2021-07-23 17:22 GMT

ಕಾಪು : ಕಳೆದ ಮೂರು ದಿನಗಳಿಂದ ಕಾಪು ಪುರಸಭಾ ವ್ಯಾಪ್ತಿಯ ಮೂಳೂರಿನ  ತೊಟ್ಟಂ ಪರಿಸರದಲ್ಲಿನ ಸುಮಾರು 2 ಕಿಲೋ ಮೀಟರ್ ಉದ್ದದ ಜನ ವಸತಿ ಪ್ರದೇಶದಲ್ಲಿ ಹೆಚ್ಚಿನ ಕಡಲ್ಕೊರೆತ ಕಾಣಿಸಿಕೊಂಡಿದ್ದು, ಶುಕ್ರವಾರ ತೀವ್ರಗೊಂಡಿದೆ.

ಕಳೆದ ಜೂನ್ ತಿಂಗಳಲ್ಲಿ ಕಡಲ್ಕೊರೆತ ಸಂಭವಿಸಿ, 30ಕ್ಕೂ ಹೆಚ್ಚಿನ ತೆಂಗಿನ ಮರಗಳು ಕಡಲೊಡಳು ಸೇರಿದ್ದವು, ಗುರುವಾರ ಮತ್ತೆ ಕಡಲ್ಕೊರೆತ ಹೆಚ್ಚಾಗಿದ್ದು, ಹಲವು ತೆಂಗಿನ ಮರಗಳು ಸಮುದ್ರಪಾಲಾಗಿದ್ದು, ಇನ್ನೂ ಕೆಲವು ತೆಂಗಿನ ಮರಗಳು ಸಮುದ್ರ ಪಾಲಾಗುವ ಭೀತಿ ಎದುರಾಗಿದೆ. ಕಳೆದ ತಿಂಗಳು ಕಡಲ್ಕೊರೆತಕ್ಕೆ ಹಾಕಲಾದ ತಾತ್ಕಾಲಿಕ ತಡೆಗೋಡೆ ಸಮುದ್ರಪಾಲಾಗಿದೆ. ಇಲ್ಲಿ ಸಮುದ್ರ ದಡ ಮತ್ತು ಜನವಸತಿ ಪ್ರದೇಶಗಳನ್ನು ಉಳಿಸುವ ನಿಟ್ಟಿನಲ್ಲಿ ಶಾಶ್ವತ ತುರ್ತು ತಡೆಗೋಡೆ ನಿರ್ಮಿಸುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ. ಪಡುಬಿದ್ರಿ, ಹೆಜಮಾಡಿ, ಕಾಪು ಪರಿಸರದಲ್ಲೂ ಕಡಲು ಪ್ರಕ್ಷುಬ್ದಗೊಂಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News