ಕಾಸರಗೋಡು : ತಮ್ಮನನ್ನು ಚಾಕುವಿನಿಂದ ಇರಿದು ಕೊಲೆಗೈದ ಅಣ್ಣ ; ದೂರು

Update: 2021-07-24 10:24 GMT

ಕಾಸರಗೋಡು : ತಮ್ಮನನ್ನು ಚಾಕುವಿನಿಂದ ಇರಿದು ಅಣ್ಣನೇ ಕೊಲೆಗೈದಿದ್ದಾನೆ ಎನ್ನಲಾದ ಘಟನೆ ಸೀತಾಂಗೋಳಿಯ ಮುಗು ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಮುಗು ಉರ್ಮಿಯ ಅಬ್ದುಲ್ಲಾ ಮುಸ್ಲಿಯಾರ್ ಎಂಬವರ ಪುತ್ರ ನಿಸಾರ್ ( 35) ಮೃತರು ಎಂದು ಗುರುತಿಸಲಾಗಿದ್ದು, ಆತನ ಅಣ್ಣ ರಫೀಕ್ ಎಂಬಾತ ಕೃತ್ಯದ ಬಳಿಕ ತಲೆ ಮರೆಸಿಕೊಂಡಿದ್ದಾನೆ ಎಂದು ದೂರಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ನಿಸಾರ್ ನನ್ನು ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕೃತ್ಯಕ್ಕೆ  ಕಾರಣ ತಿಳಿದು ಬಂದಿಲ್ಲ . ಬದಿಯಡ್ಕ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News