ಮಂಜೇಶ್ವರ : ಕಾವಲುಗಾರನನ್ನು ಕಟ್ಟಿ ಹಾಕಿ ಜುವೆಲ್ಲರಿಯಿಂದ 15 ಕೆಜಿ ಬೆಳ್ಳಿ, ನಗದು ದರೋಡೆ

Update: 2021-07-26 05:40 GMT

ಮಂಜೇಶ್ವರ :  ಕಾವಲುಗಾರನನ್ನು ಕಟ್ಟಿ ಹಾಕಿ ಜುವೆಲ್ಲರಿಯಿಂದ ಸುಮಾರು 15ಕೆಜಿ ಬೆಳ್ಳಿ ಆಭರಣ ಹಾಗೂ 4 ಲಕ್ಷ ರೂ. ನಗದು ದರೋಡೆ ಮಾಡಿದ ಘಟನೆ ಸೋಮವಾರ ಮುಂಜಾನೆ ಮಂಜೇಶ್ವರದ ಹೊಸಂಗಡಿಯಲ್ಲಿ ನಡೆದಿದೆ.

ದರೋಡೆಕೋರರ ಹಲ್ಲೆಯಿಂದ ಗಂಭೀರ ಗಾಯಗೊಂಡ ಕಾವಲುಗಾರ ಅಬ್ದುಲ್ಲಾ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳವನ್ನು ತನಿಖಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಇಂದು  ಮುಂಜಾನೆ 3 ಗಂಟೆಯ ಸುಮಾರಿಗೆ ನಡೆದಿರುವುದಾಗಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News