ಬಿಜೆಪಿ ಸರ್ಕಾರ ವಾಮಮಾರ್ಗದಿಂದ ಬಂದಿದ್ದು, ಜನಾದೇಶದಿಂದ ಅಲ್ಲ : ಮಾಜಿ ಸಚಿವ ಆಂಜನೇಯ

Update: 2021-07-26 08:39 GMT

ಮಂಗಳೂರು: ಬಿಜೆಪಿ ಸರ್ಕಾರ ವಾಮಮಾರ್ಗದಿಂದ ಬಂದಿದ್ದು, ಜನಾದೇಶದಿಂದ ಬಂದಿದ್ದು ಅಲ್ಲ. ಶಾಸಕರನ್ನು ಖರೀದಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು. ಪ್ರಜಾಸತ್ತಾತ್ಮಕವಾಗಿ ರೂಪುಗೊಂಡ ಸರ್ಕಾರ ಕೂಡಾ ಅಲ್ಲ. ಕಾಂಗ್ರೆಸ್‌, ಜೆಡಿಎಸ್ ನಿಂದ ಶಾಸಕರನ್ನು ಖರೀದಿ ಮಾಡಿ ಜನಸ್ನೇಹಿ ಸರ್ಕಾರ ಎಂದು ಹೇಳಿದರು. ಇದು ಜನಸ್ನೇಹಿ ಅಲ್ಲ, ಜನವಿರೋಧಿ ಸರ್ಕಾರ ಎಂದು ಮಾಜಿ ಸಚಿವ ಎಚ್. ಆಂಜನೇಯ ಹೇಳಿದರು.

ಯಡಿಯೂರಪ್ಪ ರಾಜೀನಾಮೆ ಬಗ್ಗೆ ಮಾಜಿ ಸಚಿವ ಆಂಜನೇಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಇದೀಗ ಸಿಎಂ ಬದಲಾಗಿದ್ದಾರೆ. ಆದರೆ ಉತ್ತಮ ಜನಪ್ರತಿನಿಧಿ ಬರ್ತಾರೆ ಎಂಬ ವಿಶ್ವಾಸ ನಮಗಿಲ್ಲ. 17 ಮಂದಿ ಶಾಸಕರಿಂದ ಯಡಿಯೂರಪ್ಪ ಸಿಎಂ ಆಗಿದ್ದು. ಅವರು ಕಾಂಗ್ರೆಸ್ ಗೆ ದ್ರೋಹ ಮಾಡಿ ಹೋದವರು. ಅವರಿಗೆ ಒಳ್ಳೆಯದಾಗಬಾರದು ಅನ್ನೋದೇ ನಮ್ಮ ಮಾತು ಎಂದರು.

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ರಾಹುಲ್ ಗಾಂಧಿ ಪ್ರಧಾನಿ ಆಗುತ್ತಾರೆ ಎಂದು ಭವಿಷ್ಯ ನುಡಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News