ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ: ಶಿಕಾರಿಪುರದಲ್ಲಿ ಅಸಮಾಧಾನ

Update: 2021-07-26 13:52 GMT

ಶಿಕಾರಿಪುರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ತವರು ಕ್ಷೇತ್ರವಾದ ಶಿಕಾರಿಪುರದಲ್ಲಿ ಅಸಮಧಾನ ವ್ಯಕ್ತವಾಗಿದೆ.

ಶಿಕಾರಿಪುರದ ಬಸ್ ನಿಲ್ದಾಣ, ಪೆಟ್ರೋಲ್ ಬಂಕ್ ರಸ್ತೆ ಸೇರಿದಂತೆ ವಿವಿದೆಡೆ ಇರುವ ಅಂಗಡಿಗಳನ್ನು ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿರುವ ಬಗ್ಗೆ ವರದಿಯಾಗಿದೆ.

ಬಿಜೆಪಿ ಕಾರ್ಯಕರ್ತರು ಹೈಕಮಾಂಡ್ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರಿಗೆ ಮಾಡಿದ ಅನ್ಯಾಯವಲ್ಲ, ಜನ ಸಾಮಾನ್ಯರಿಗೆ ಮಾಡಿದ ಅನ್ಯಾಯವೆಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News