ದಾರುಲ್ ಇರ್ಷಾದ್ ಎಜುಕೇಶನಲ್ ಸೆಂಟರ್ ಮಿತ್ತೂರು : ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

Update: 2021-07-26 16:09 GMT

ಮಂಗಳೂರು : ಆರು ತಿಂಗಳ ವಿಶೇಷ ಕೋರ್ಸ್ 'ಅಶ್ಶಮಾಯಿಲುಲ್ ಮುಹಮ್ಮದಿಯ್ಯ' ಪೂರ್ಣಗೊಳಿಸಿದ ದ್ವಿತೀಯ ಬ್ಯಾಚ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ದಾರುಲ್ ಇರ್ಷಾದ್ ಎಜುಕೇಶನಲ್ ಸೆಂಟರ್ ಮಿತ್ತೂರಿನಲ್ಲಿ ನಡೆಯಿತು.

ಉಡುಪಿ,  ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ (ಮಾಣಿ ಉಸ್ತಾದ್) ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.

11 ವಿದ್ಯಾರ್ಥಿಗಳಿಗೆ ಶಾಮಿಲಿ ಪದವಿ ಹಾಗೂ 26 ವಿದ್ಯಾರ್ಥಿನಿಯರಿಗೆ ಶಾಮಿಲ ಪದವಿಯೊಂದಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಇದೇ ವೇಳೆ ಈ ತರಗತಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿ ವಿಭಾಗದಲ್ಲಿ ಇಬ್ಬರಿಗೆ ಹಾಗೂ ವಿದ್ಯಾರ್ಥಿನಿ ವಿಭಾಗದಲ್ಲಿ ಇಬ್ಬರಿಗೆ ಮಾಣಿ ಉಸ್ತಾದ್ ಅವರು ಬಹುಮಾನ ನೀಡಿದರು.

ಕಾರ್ಯಕ್ರಮವನ್ನು ದಾರುಲ್ ಇರ್ಶಾದ್ ಮ್ಯಾನಜಿಂಗ್ ಡೈರೆಕ್ಟರ್ ಶರೀಫ್ ಸಖಾಫಿ ಉದ್ಘಾಟಿಸಿದರು. ಈ ಸಂದರ್ಭ ರಾಜ್ಯ ಸುನ್ನೀ ಯುವಜನ ಸಂಘ ನಾಯಕ ಡಿ.ಕೆ. ಉಮರ್ ಸಖಾಫಿ ಕಂಬಳಬೆಟ್ಟು, ಅಶ್ಶಮಾಯಿಲ್ ಮುಹಮ್ಮದಿಯ್ಯ ಕೋರ್ಸ್ ಅಧ್ಯಾಪಕ ಇಸ್ಮಾಈಲ್ ಸಅದಿ‌ ಮಾಚಾರ್, ದಾರುಲ್ ಇರ್ಶಾದ್ ಸದರ್ ಮುಅಲ್ಲಿಂ ಅಬ್ದುಲ್ ರಝಾಕ್ ಮುಸ್ಲಿಯಾರ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News