ಚಿಕ್ಕನಾಯಕನಹಳ್ಳಿ: ಕೊಟ್ಟಿಗೆಗೆ ಬೆಂಕಿ; ಐದು ಜಾನುವಾರುಗಳು ಸಾವು

Update: 2021-07-27 04:37 GMT

ತುಮಕೂರು, ಜು.27: ದನದ ಕೊಟ್ಟಿಗೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ಐದು ಜಾನುವಾರು ಹಾಗೂ ದ್ವಿಚಕ್ರ ವಾಹನವೊಂದು ಬೆಂಕಿಗೆ ಆಹುತಿಯಾದ ಘಟನೆ ಚಿಕ್ಕನಾಯಕನಹಳ್ಳಿಯ ಮಾದಾಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ಮಾದಾಪುರ ನಿವಾಸಿ ಪರಮೇಶ್ ಎಂಬವರಿಗೆ ಸೇರಿರುವ ಕೊಟ್ಟಿಗೆ ಇದಾಗಿದೆ. ಬೆಂಕಿಯಿಂದ ಕೊಟ್ಟಿಗೆ ಸಂಪೂರ್ಣವಾಗಿ ಭಸ್ಮವಾಗಿದ್ದು, 2 ಹೋರಿ, 2 ಕರು ಹಾಗೂ ದ್ವಿಚಕ್ರ ವಾಹನವೊಂದು ಸುಟ್ಟು ಕರಕಲಾಗಿದೆ.

ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

ಈ ಬಗ್ಗೆ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News