ಉಜ್ಜಯಿನಿಯ ಮಹಾಕಾಳೇಶ್ವರ ಶಿವ ದೇವಸ್ಥಾನದಲ್ಲಿ ಕಾಲ್ತುಳಿತ, ಹಲವರಿಗೆ ಗಾಯ
Update: 2021-07-27 05:57 GMT
ಭೋಪಾಲ್: ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ಶಿವ ದೇವಸ್ಥಾನದಲ್ಲಿ ಸೋಮವಾರ ಕಾಲ್ತುಳಿತದ ರೀತಿಯ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಹಲವಾರು ಭಕ್ತರು ಗಾಯಗೊಂಡಿದ್ದಾರೆ ಎಂದು NDTV ವರದಿ ಮಾಡಿದೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಕೆಲವು ವಿಐಪಿಗಳ ಭೇಟಿಯ ಬಳಿಕ ಜನಸಂದಣಿಯನ್ನು ನಿಯಂತ್ರಿಸಲಾಗದೆ ಈ ಘಟನೆ ನಡೆದಿದೆ. ಕೋವಿಡ್ ನಿಯಮಗಳನ್ನು ಗಾಳಿಗೆ ತೂರಲಾಗಿತ್ತು.
ದೇವಾಲಯದ ನಾಲ್ಕನೇ ಗೇಟ್ನಲ್ಲಿ ಈ ಘಟನೆ ನಡೆದಿದೆ. ನೂಕು-ನುಗ್ಗಲಿನ ನಂತರ ಹಲವಾರು ಜನರು ಕೆಳಗೆ ಬಿದ್ದು ಕಾಲ್ತುಳಿತ ಸಂಭವಿಸಿದೆ.