ಸಂಸತ್ತಿನಲ್ಲಿ ಕಲಾಪಕ್ಕೆ ಅಡ್ಡಿಪಡಿಸುವ ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ
ಹೊಸದಿಲ್ಲಿ: ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ "ಸಾರ್ವಜನಿಕರ ಹಾಗೂ ಮಾಧ್ಯಮಗಳ ಮುಂದೆ ಕಾಂಗ್ರೆಸ್ ಪಕ್ಷದ ವರ್ತನೆಯ ಕುರಿತು ಮಾತನಾಡಬೇಕು" ಎಂದು ಬಿಜೆಪಿ ಸಂಸದರನ್ನು ಕೇಳಿಕೊಂಡರು.
ಅಧಿವೇಶನವು ಪ್ರತಿಪಕ್ಷಗಳ ಪ್ರತಿಭಟನೆಗೆ ಸಾಕ್ಷಿಯಾಗಿದ್ದು, ಪೆಗಾಸಸ್ ಫೋನ್ ಹ್ಯಾಕಿಂಗ್ ವಿವಾದ, ಕೃಷಿ ಕಾನೂನುಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಲು ಪ್ರತಿಪಕ್ಷಗಳು ಒತ್ತಾಯಿಸಿವೆ
ಬಿಜೆಪಿಯ ಸಂಸದೀಯ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ ಅವರು, ಈ ಅಧಿವೇಶನದಲ್ಲಿ ಒಂದು ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನವನ್ನು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ತಡೆಯುತ್ತಿದೆ ಎಂದು ಆರೋಪಿಸಿದರು.
ದೇಶದ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಕಳೆದ ವಾರ ನಡೆದ ಸರ್ವಪಕ್ಷ ಸಭೆಯನ್ನು ಕಾಂಗ್ರೆಸ್ ಬಹಿಷ್ಕರಿಸಿರುವುದನ್ನು ಪ್ರಧಾನಿ ಗಮನಸೆಳೆದರು ಮತ್ತು ಪಕ್ಷವು ಇತರರು ಹಾಜರಾಗದಂತೆ ತಡೆಯಿತು ಎಂದು ಹೇಳಿದರು.