ನನ್ನನ್ನು ಸಿಎಂ ಮಾಡುವಂತೆ ಯಾರ ಬಳಿಯೂ ಕೇಳಿಲ್ಲ: ಬಸವರಾಜ ಬೊಮ್ಮಾಯಿ

Update: 2021-07-27 12:50 GMT

ಬೆಂಗಳೂರು, ಜು.27: ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿ ಆಗಬೇಕು ಎಂದು ಬಯಸಿಲ್ಲ. ಈ ಬಗ್ಗೆ ಯಾರ ಬಳಿಯೂ ಕೇಳಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಕಪೋಲಕಲ್ಪಿತ ಸುದ್ದಿಗಳಿಗೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಯಾವ ಯಾವ ಹಂತದಲ್ಲಿ ಏನೇನು ಆಗಬೇಕು, ಅದೇ ಆಗುತ್ತದೆ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ವಿಷಯಗಳು ಪ್ರಸ್ತಾಪವಾಗಿ, ಚರ್ಚೆಗೊಳಪಡಲಿವೆ. ಆನಂತರ, ಶಾಸಕರು ನೂತನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದರು.

ಶಾಸಕಾಂಗ ಪಕ್ಷದ ಸಭೆಯಲ್ಲಿ ಕೈಗೊಂಡ ನಿರ್ಣಯ ಮೊದಲು ರಾಜ್ಯಮಟ್ಟದಲ್ಲಿ, ಬಳಿಕ ಕೇಂದ್ರ ಮಟ್ಟದಲ್ಲಿ ನಿರ್ಣಯವಾಗಿ, ಆನಂತರ ಸಂಸದೀಯ ಮಂಡಳಿಯಲ್ಲಿ ಅಂತಿಮ ನಿರ್ಣಯವಾಗಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಾನು ಆಪ್ತ ಎನ್ನುವ ಕಾರಣಕ್ಕೆ ಅವರು ನನ್ನ ಹೆಸರು ಸೂಚಿಸುತ್ತಾರೆ ಎನ್ನುವುದು ಸರಿಯಲ್ಲ ಎಂದು ಅವರು ಹೇಳಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News