ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರ ನಡೆಸುತ್ತೇನೆ: ನೂತನ ಸಿಎಂ ಬಸವರಾಜ ಬೊಮ್ಮಾಯಿ

Update: 2021-07-27 17:19 GMT

ಬೆಂಗಳೂರು: ಕೇಂದ್ರದ ನಾಯಕರು ಹಾಗೂ ಯಡಿಯೂರಪ್ಪ ನನ್ನ ಮೇಲೆ ನಂಬಿಕೆಯಿಟ್ಟು ಅಧಿಕಾರ ನೀಡಿದ್ದಾರೆ. ಪಕ್ಷ, ಸಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಆಡಳಿತ ನೀಡುತ್ತೇನೆ ಎಂದು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ರಾಜಭವನಕ್ಕೆ ತೆರಳುವ ಮುನ್ನ ಸುದ್ದಿಗಾರರರೊಂದಿಗೆ ಮಾತನಾಡಿದ ಸಿಎಂ, ಶಾಸಕರು ಸರ್ವಾನುಮತದಿಂದ ನನ್ನ ಆಯ್ಕೆ ಮಾಡಿದ್ದಾರೆ. ಅವರಿಗೆಲ್ಲ ನಾನು‌ ಚಿರ ಋಣಿ. ರಾಜ್ಯದ ಜನರ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. 

ನನ್ನ ಹೆಸರು ಸೂಚಿಸಿ ಯಡಿಯೂರಪ್ಪನವರು ಆಶೀರ್ವಾದ ಮಾಡಿದ್ದಾರೆ. ಪಕ್ಷದ ನಾಯಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ ಎಂದು ಹೇಳಿದ್ದಾರೆ. 

ಸರಕಾರ ರಚನೆಗೆ ಹಕ್ಕು ಮಂಡನೆ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇನ್ನಿತರ ಮುಖಂಡರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News