ನೂತನ ಸಿಎಂ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ ಡಾ.ಸಿ.ಎನ್ ಅಶ್ವತ್ಥನಾರಾಯಣ

Update: 2021-07-27 17:06 GMT

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ಪಕ್ಷದ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಅಭಿನಂದಿಸಿದ್ದಾರೆ.

ವರಿಷ್ಠರು ಅತ್ಯುತ್ತಮ ನಾಯಕರನ್ನೇ ಆಯ್ಕೆ ಮಾಡಿದೆ. ಸಂಸದೀಯ ಕಲಾಪದಲ್ಲಿ ದಶಕಗಳ ಕಾಲದ ಅಪಾರ ಅನುಭವ ಹೊಂದಿರುವ ಅವರು, ಈಗಾಗಲೇ ಹಲವಾರು ಪ್ರಮುಖ ಜಬಾವ್ದಾರಿಗಳನ್ನು ನಿಭಾಯಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.‌ಆರ್.‌ಬೊಮ್ಮಾಯಿ ಅವರ ಪುತ್ರರೂ ಆಗಿರುವ ಅವರು, ತಮ್ಮ ಹೊಣೆಯನ್ನು ಸಮರ್ಥವಾಗಿ ನಿರ್ವಹಿಸುತ್ತಾರೆಂಬ ನಂಬಿಕೆ ನನಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.

ಮೇಲ್ಮನೆ ಸದಸ್ಯರಾಗಿ, ಶಾಸಕರಾಗಿ ಹಾಗೂ ಸಹಕಾರ, ಜಲ ಸಂಪನ್ಮೂಲ, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಗೃಹ ಸಚಿವರಾಗಿ ಅತ್ಯುತ್ತಮವಾಗಿ ತಮ್ಮ ಕರ್ತವ್ಯ ನಿರ್ವಹಣೆ ಮಾಡಿದ್ದರು. ಈಗ ಅವರಿಗೆ ಅವರಿಗೆ ಪಕ್ಷದಲ್ಲಿ ಅತ್ಯುನ್ನತ ಗೌರವ ಸಿಕ್ಕಿದೆ. ಅವರ ಆಯ್ಕೆಯನ್ನು ನಾವೆಲ್ಲರೂ ಮನಸಾರೆ ಸ್ವಾಗತಿಸುತ್ತೇವೆ ಹಾಗೂ ಅವರ ನಾಯಕತ್ವದಲ್ಲಿ ಕೆಲಸ ಮಾಡುತ್ತೇವೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ. 

ಕಳೆದ ಎರಡು ವರ್ಷಗಳಿಂದ ಬಿಜೆಪಿ ಸರಕಾರ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿತ್ತು. ಅವೆಲ್ಲವೂ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದುವರಿಯಲಿವೆ. ಅಲ್ಲದೆ, ಪ್ರವಾಹ ಹಾಗೂ ಕೋವಿಡ್‌ ಸಂಕಷ್ಟಗಳನ್ನೂ ಸಮರ್ಥವಾಗಿ ಎದುರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News