ದ.ಕ. ಜಿಲ್ಲೆಯಲ್ಲಿ ಮಂಗಳವಾರ 247 ಮಂದಿಗೆ ಕೋವಿಡ್ ಸೋಂಕು ದೃಢ

Update: 2021-07-27 17:18 GMT

ಮಂಗಳೂರು, ಜು.27: ದ.ಕ. ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 247 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ ಮೃತಪಟ್ಟ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ 226 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ ಜಿಲ್ಲೆಯಲ್ಲಿ ಒಟ್ಟು 1,397 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 98,927 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 95,351 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2,179 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

11,51,850 ಮಂದಿಗೆ ಕೋವಿಡ್ ಲಸಿಕೆ
ದ.ಕ. ಜಿಲ್ಲೆಯ ಕೋವಿಡ್-19 ಲಸಿಕಾ ಅಭಿಯಾನದಡಿ ಇಲ್ಲಿಯವರೆಗೆ ಒಟ್ಟು 11,51,850 ಮಂದಿ ಫಲಾನುಭವಿಗಳು ಲಸಿಕೆಯನ್ನು ಪಡೆದಿದ್ದಾರೆ.

ಮೊದಲನೆಯ ಡೋಸ್ ಲಸಿಕೆ ಒಟ್ಟು 8,87,712 ಫಲಾನುಭವಿಗಳಿಗೆ ಹಾಗೂ ಎರಡನೇ ಡೋಸ್ ಲಸಿಕೆ ಒಟ್ಟು 2,64,138 ನೀಡಲಾಗಿದೆ. ಲಸಿಕೆ ಪಡೆದವರಲ್ಲಿ 18ರಿಂದ 44 ವರ್ಷದ ವಯೋಮಾನದವರ ಗುರಿಯಲ್ಲಿ ಮೊದಲನೆಯ ಡೋಸ್ ಶೇ.31.53 ಹಾಗೂ ಎರಡನೇ ಡೋಸ್ ಶೇ.4.48 ನೀಡಲಾಗಿದೆ.

45 ವರ್ಷದಿಂದ 59 ವರ್ಷದೊಳಗಿನ ಫಲಾನುಭವಿಗಳ ಗುರಿಯಲ್ಲಿ ಪ್ರಥಮ ಡೋಸ್ ಶೇ.64.52 ಹಾಗೂ ಎರಡನೇ ಡೋಸ್ ಶೇ.38.13 ನೀಡಲಾಗಿದೆ.

60 ವರ್ಷ ಮೇಲ್ಪಟ್ಟವರ ಗುರಿಯಲ್ಲಿ ಪ್ರಥಮ ಡೋಸ್ ಶೇ.91.94 ಹಾಗೂ ಎರಡನೇ ಡೋಸ್ ಶೇ.55.34 ನೀಡಲಾಗಿದೆ. ಜು.27ರಂದು ಜಿಲ್ಲೆಯಲ್ಲಿ 11,901 ಮಂದಿ ಲಸಿಕೆ ಪಡೆದಿದ್ದಾರೆ.

ಜು.28 ರಂದು ಲಸಿಕಾ ಶಿಬಿರಕ್ಕೆ ಸಂಬಂಧಿಸಿದಂತೆ, ಜಿಲ್ಲಾ ವೆಲ್ಲಾಕ್ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆಯನ್ನು ನೀಡಲಾಗುವುದು. ಅಲ್ಲದೆ, ಬೆಳ್ತಂಗಡಿ ತಾಲೂಕಿನ ಲಸಿಕಾ ಶಿಬಿರಕ್ಕೆ ಸಂಬಂಧಿಸಿಂತೆ ತಾಲೂಕು ಆಸ್ಪತ್ರೆ ಬೆಳ್ತಂಗಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ನಾರಾವಿ, ಮುಂಡಾಜೆ, ಚಾರ್ಮಡಿ, ಧರ್ಮಸ್ಥಳ, ಉಜಿರೆ, ಮುಂಡಾಜೆ, ಮತ್ತು ಉಪಕೆಂದ್ರಗಳಾದ ಉಪಕೇಂದ್ರ ಬಾರ್ಯ ಮತ್ತು ಮದುವೆಟ್ಟುವಲ್ಲಿ ಲಸಿಕಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News