ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪದಗ್ರಹಣಕ್ಕೆ ಕ್ಷಣಗಣನೆ

Update: 2021-07-28 04:56 GMT

ಬೆಂಗಳೂರು, ಜು.28: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಪದಗ್ರಹಣಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಪೂರ್ವಾಹ್ನ 11 ಗಂಟೆಗೆ ಅವರು ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೀಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಬೊಮ್ಮಾಯಿ ಅವರ ಬೆನ್ನು ತಟ್ಟಿ ಶುಭ ಹಾರೈಸಿದರು. ಪಕ್ಷದ ಶಾಸಕರು ಕೂಡಾ ಬೊಮ್ಮಾಯಿಯವರಿಗೆ ಹೂಗುಚ್ಚ ನೀಡಿ ಶುಭ ಹಾರೈಸಿದರು.

ಇದಕ್ಕೂ ಮೊದಲು ಬಸವರಾಜ ಬೊಮ್ಮಾಯಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News