ಮುಖ್ಯಮಂತ್ರಿ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ: ಬಿ.ಸಿ.ಪಾಟೀಲ್

Update: 2021-07-28 05:23 GMT

ಬೆಂಗಳೂರು, ಜು.28: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ. ಈಗಲೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ ಎಂದು ಮಾಜಿ ಸಚಿವ, ಹಿರೆಕೆರೂರು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನಿಂದು ಭೇಟಿ ಮಾಡಿ ಶುಭಕೋರಿದ ಬಿ.ಸಿ.ಪಾಟೀಲ್, ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು.

ನಾವು ಮಂತ್ರಿಯಾಗಿ ಮುಂದುವರಿಯುತ್ತೇವೋ ಇಲ್ಲವೋ ಎಂಬುದನ್ನು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಯಡಿಯೂರಪ್ಪನವರ ಮಾರ್ಗದರ್ಶನ ಎಲ್ಲರಿಗೂ ಇದ್ದೇ ಇರುತ್ತದೆ.ಹಾಗೆಂದ ಮಾತ್ರಕ್ಕೆ ಅದು ಶ್ಯಾಡೋ ಎಂದು ಭಾವಿಸುವುದು ತಪ್ಪು. ಯಡಿಯೂರಪ್ಪ ಹಿರಿಯರು, ಅನುಭವಿಗಳು. ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದರಂತೆ ಅವರು ನಡೆಯುತ್ತಾರೆ. ನಾವು ಸಚಿವ ಸ್ಥಾನಕ್ಕಾಗಿ ಯಾರ ಮೇಲೂ ಒತ್ತಡ ತರುವುದಿಲ್ಲ. ಬೆಂಗಳೂರು ನಂಬಿ ಬಂದಿದ್ದೇವೆ‌. ದಿಲ್ಲಿ ವರಿಷ್ಠರು ಆಶೀರ್ವಾದ ಮಾಡುತ್ತಾರೆ ಎಂವ ವಿಶ್ವಾಸವಿದೆ ಎಂದು ಬಿ.ಸಿ.ಪಾಟೀಲ್ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News